
03-08-2010
ಸೋಮವಾರ
ನಾಡು ಮಾಹಿತಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕರೊನಾ ಸೋಂಕು ತಗುಲಿದೆ. ಅವರೇ ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದಾರೆ.
ನನ್ನ ಕರೊನಾ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್-19 ಟೆಸ್ಟ್ಗೆ ಒಳಗಾಗಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಷ್ಟೇ ಅಲ್ಲ ಈಗಲೇ ಕ್ವಾರಂಟೈನ್ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ
ಇತ್ತೀಚೆಗೆ ಸಿಎಂ ಕಚೇರಿ-ನಿವಾಸ ಸೇರಿ 7 ಜನರಲ್ಲಿ ಕರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡ ಒಂದು ವಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು.
ನಂತರ ಮಾಡಿದ ಕೊವಿಡ್-19 ಟೆಸ್ಟ್ ವರದಿ ಜುಲೈ 18ರಂದು ಹೊರಬಿದ್ದಿತ್ತು. ಅದರಲ್ಲಿ ನೆಗೆಟಿವ್ ಎಂದು ಹೇಳಲಾಗಿತ್ತು. ಆದರೆ ಈಗ ಮಾಡಿಸಿದ ಟೆಸ್ಟ್ನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರೂ ಕೂಡ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ವರದಿ ಬಂದಿದ್ದು, ವರದಿಯಲ್ಲಿ ಸಿಎಂ ಬಿಎಸ್ ವೈ ಪುತ್ರಿ ಪದ್ಮಾವತಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸ್ವಯಂ ಕ್ವಾರಂಟೈನ್ ಗೆ ಒಳಲಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇಂದು ಯಡಿಯೂರಪ್ಪ ಅವರ ಮೊಮ್ಮಕ್ಕಳು ಪರೀಕ್ಷೆಗೆ ಒಳಪಡಲಿದ್ದಾರೆ.
ನಾಡು ಮಾಹಿತಿ…