ಬೆಂಗಳೂರು: ಕೊರೋನಾ ಕಾರಣದಿಂದ ಶಾಲೆ ಇಲ್ಲದೇ, ಮನೆಯಲ್ಲೇ ಉಳಿದ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.
ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ತಂತ್ರಜ್ಞಾನ ಆಧಾರಿತ ವಿದ್ಯಾಗಮ ನಿರಂತರ ಕಲಿಕಾ ಯೋಜನೆ ಜಾರಿಗೆ ತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಎಲ್ಲಾ ಮಕ್ಕಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಸಿಗುವಂತೆ ಮಾಡುವುದು ಈ ಮೂಲಕ ಮಕ್ಕಳ ಕಲಿಕೆಗೆ ತೊಡಕಾಗದಂತೆ ನೋಡಿಕೊಳ್ಳುವುದು ಯೋಜನೆಯ ಉದ್ದೇಶವಾಗಿದೆ.
ಗ್ರಾಮ, ನಗರ-ಪಟ್ಟಣ, ಗುಡ್ಡಗಾಡು ಪ್ರದೇಶ, ಹಳ್ಳಿಗಾಡು, ಬೆಟ್ಟ ಅರಣ್ಯದಂಚಿನ ಗ್ರಾಮಗಳ ಮಕ್ಕಳಿಗೆ ಟಿವಿ ಫೋನ್ ಸೌಲಭ್ಯ ಇರುವುದಿಲ್ಲ. ಅವರ ಕಲಿಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ವಿದ್ಯಾಗಮ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪ್ರತಿ ಶಾಲೆಯ 20ರಿಂದ 25 ಮಕ್ಕಳಿಗೆ ಮಾರ್ಗದರ್ಶಿ ಶಿಕ್ಷಕರನ್ನು ನೇಮಿಸಿ ಕಾಲ್ಪನಿಕ ಕಲಿಕಾ ತರಗತಿ ಆರಂಭಿಸಲಾಗುವುದು. ಯಾವುದೇ ತಂತ್ರಜ್ಞಾನ ಆಧಾರಿತ ಸಾಧನಗಳು ಇಲ್ಲದ ಮಕ್ಕಳ ಕಲಿಕೆಗೆ ವ್ಯವಸ್ಥೆ ಮಾಡಲಾಗುವುದು. ಇಂಟರ್ನೆಟ್ ಇಲ್ಲದ ಮೊಬೈಲ್ ಫೋನ್ ಹೊಂದಿರುವವರಿಗೆ ತರಗತಿ ನಡೆಸಲಾಗುವುದು.
ಇಂಟರ್ನೆಟ್ ಇರುವ ಸ್ಮಾರ್ಟ್ಫೋನ್, ಕಂಪ್ಯೂಟರ್ ಹೊಂದಿರುವವರಿಗೆ ಕಲಿಕೆಗೆ ವ್ಯವಸ್ಥೆ ಮಾಡಲಾಗಿದೆ. ಒಂದರಿಂದ ಐದು, ಆರರಿಂದ ಎಂಟು ಹಾಗೂ 8ರಿಂದ 10ನೇ ತರಗತಿ ಮಕ್ಕಳನ್ನು ವಾಸಸ್ಥಳದ ಪ್ರದೇಶವನ್ನು ಆಧರಿಸಿ ಹಂಚಿಕೆ ಮಾಡಲಾಗಿದೆ. ಕಲಿಕಾ ಸಾಮಗ್ರಿಗಳನ್ನು ಬಳಸಿಕೊಂಡು ಮಕ್ಕಳಿಗೆ ಪಾಲಕರಿಗೆ ಮಾರ್ಗದರ್ಶನ ನೀಡಲಾಗುವುದು. ವಿದ್ಯಾವಂತ ಯುವಕರು ಯುವತಿಯರನ್ನು ಗುರುತಿಸಿ ಸ್ವಯಂಸೇವಕರನ್ನಾಗಿ ನೇಮಿಸಲಾಗುವುದು.
ಬೆಂಗಳೂರು (ಆ. 4): ಕೆಲವೇ ದಿನಗಳಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ. ಬಹುತೇಕ ಆಗಸ್ಟ್ 6 ಅಥವಾ 8ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ.
ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಘೋಷಿಸುವುದಾಗಿ ಜುಲೈ 20ರಂದು ಹೇಳಿದ್ದರು. ಕರ್ನಾಟಕದಲ್ಲಿ ಈ ವರ್ಷ ಸುಮಾರು 8.40 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಕಳೆದ ತಿಂಗಳು ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಜುಲೈ 3ರಂದು ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿತ್ತು.
ಈಗಾಗಲೇ ಮೌಲ್ಯಮಾಪನ ಮುಕ್ತಾಯವಾಗಿದೆ. ಹೀಗಾಗಿ, ಈ ವಾರದಲ್ಲೇ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ.
ಫಲಿತಾಂಶ ಪ್ರಕಟವಾದ ಬಳಿಕ ನಿಮ್ಮ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿದೆ ಸುಲಭ ವಿಧಾನ.
ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ karresults.nic.in ವೆಬ್ಸೈಟ್ಗೆ ಹೋಗಿ.
ಎಸ್ಎಸ್ಎಲ್ಸಿ ರಿಸಲ್ಟ್ 2020 ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಪರೀಕ್ಷೆಯ ರೋಲ್ ನಂಬರ್ ಮತ್ತು ಪೇಜ್ನಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ.
ಹಾಲ್ ಟಿಕೆಟ್ನ ಮಾಹಿತಿಯನ್ನು ವೆಬ್ಸೈಟ್ನಲ್ಲಿ ವೇರಿಫೈ ಮಾಡಿಕೊಳ್ಳಿ.
ಆಗ ನಿಮ್ಮ ಪರೀಕ್ಷೆ ಫಲಿತಾಂಶ ಸಿಗುತ್ತದೆ.
ನಂತರ ಆ ಫಲಿತಾಂಶವನ್ನು ಪಿಡಿಎಫ್ ಫಾರ್ಮಾಟ್ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಿ. ಹಾಗೇ, ಒಂದು ಕಾಪಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಜೂನ್ 25ರಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್ಲೈನ್ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು.
ಬೆಂಗಳೂರು : ಕೊರೋನಾ ಸೋಂಕಿನ ಭೀತಿಯಿಂದಾಗಿ ಈಗಾಗಲೇ ಜುಲೈ 31, 2020ರವರೆಗೆ ಶಾಲೆಗಳನ್ನು ತೆರೆಯದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಆಗಸ್ಟ್ 31, 2020ರವರೆಗೆ ರಾಜ್ಯಾದ್ಯಂತ ಶಾಲೆಗಳನ್ನು ತೆರೆಯದಂತೆ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮುಖ್ಯ ಶಿಕ್ಷಕರಿಗೆ ಸುತ್ತೋಲೆ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಕೋವಿಡ್-19 ವೈರಸ್ ಸೋಂಕು ಹರಡುತ್ತಿರುವುದು ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಿನಾಂಕ 31-07-2020ರವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಿರುವಂತೆ ಆದೇಶಿಸಲಾಗಿತ್ತು.
ಕೇಂದ್ರ ಸರ್ಕಾರದ ಆದೇಶದಂತೆ ಎಲ್ಲಾ ಶಾಲೆಗಳು, ಕಾಲೇಜುಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳನ್ನು ದಿನಾಂಕ 31-08-2020ರವರೆಗೆ ಮುಚ್ಚುವಂತೆ ಆದೇಶಿಸಿರುವ ಹಿನ್ನಲೆಯಲ್ಲಿ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ದಿನಾಂಕ 31-08-2020ರವರೆಗೆ ಮುಚ್ಚಿರತಕ್ಕದ್ದು ಎಂಬುದಾಗಿ ಆದೇಶಿಸಿದ್ದಾರೆ.
ಹೀಗಾಗಿ ಆಗಸ್ಟ್ 31, 2020ರವರೆಗೆ ರಾಜ್ಯಾಧ್ಯಂತ ಶಾಲೆಗಳು ಬಂದ್ ಆಗಿರಲಿವೆ.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕರೊನಾ ಸೋಂಕು ತಗುಲಿದೆ. ಅವರೇ ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದಾರೆ.
ನನ್ನ ಕರೊನಾ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್-19 ಟೆಸ್ಟ್ಗೆ ಒಳಗಾಗಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಷ್ಟೇ ಅಲ್ಲ ಈಗಲೇ ಕ್ವಾರಂಟೈನ್ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ
ಇತ್ತೀಚೆಗೆ ಸಿಎಂ ಕಚೇರಿ-ನಿವಾಸ ಸೇರಿ 7 ಜನರಲ್ಲಿ ಕರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡ ಒಂದು ವಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು.
ನಂತರ ಮಾಡಿದ ಕೊವಿಡ್-19 ಟೆಸ್ಟ್ ವರದಿ ಜುಲೈ 18ರಂದು ಹೊರಬಿದ್ದಿತ್ತು. ಅದರಲ್ಲಿ ನೆಗೆಟಿವ್ ಎಂದು ಹೇಳಲಾಗಿತ್ತು. ಆದರೆ ಈಗ ಮಾಡಿಸಿದ ಟೆಸ್ಟ್ನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರೂ ಕೂಡ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ವರದಿ ಬಂದಿದ್ದು, ವರದಿಯಲ್ಲಿ ಸಿಎಂ ಬಿಎಸ್ ವೈ ಪುತ್ರಿ ಪದ್ಮಾವತಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸ್ವಯಂ ಕ್ವಾರಂಟೈನ್ ಗೆ ಒಳಲಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ. ಇಂದು ಯಡಿಯೂರಪ್ಪ ಅವರ ಮೊಮ್ಮಕ್ಕಳು ಪರೀಕ್ಷೆಗೆ ಒಳಪಡಲಿದ್ದಾರೆ.
ದಾವಣಗೆರೆ (ಆ.01) : ಕೇಂದ್ರೀಯ ಗೃಹ ಮಂತ್ರಾಲಯದ ಆದೇಶ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದನ್ವಯ ಕಂಟೈನ್ಮೆಂಟ್ ವಲಯಗಳಲ್ಲಿ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲು ಹಾಗೂ ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಪುನಃ ಆರಂಭಿಸಲು ತೆರವು-3 ಮಾರ್ಗಸೂಚಿಗಳನ್ನು ಹೊರಡಿಸಿದ್ದು ಈ ಮಾರ್ಗಸೂಚಿ ಆ.31 ರವರೆಗೆ ಜಾರಿಯಲ್ಲಿರುತ್ತದೆ.
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಕೆಳಕಂಡಂತೆ ತೆರವು -3ರ ಮಾರ್ಗಸೂಚಿ ಹೊರಡಿಸಿದ್ದು ಈ ಮಾರ್ಗಸೂಚಿ ಆ.1 ರಿಂದ ಆ.30 ರವರೆಗೆ ಚಾಲ್ತಿಯಲ್ಲಿರುತ್ತದೆ. ಇದನ್ನು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಇಲಾಖಾ ಮುಖ್ಯಸ್ಥರುಗಳು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸತಕ್ಕದ್ದು ಎಂದು ಅವರು ಆದೇಶಿಸಿರುತ್ತಾರೆ.
ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ತೆರವು-3ರ ಅವಧಿಯಲ್ಲಿ ಅನುಮತಿಸಲಾದ ಚಟುವಟಿಕೆಗಳು:
ಕಂಟೈನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಈ ಕೆಳಗಿನವುಗಳನ್ನು ಹೊರತುಪಡಿಸಿ, ಎಲ್ಲಾ ಚಟುವಟಿಕೆಗಳನ್ನು ಅನುಮತಿಸಲಾಗುವುದು : ಶಾಲೆಗಳು, ಕಾಲೇಜುಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು 31ನೇ ಆಗಸ್ಟ್ 2020 ರವರೆಗೆ ಮುಚ್ಚಲ್ಪಡುತ್ತದೆ. ಆನ್ಲೈನ್/ದೂರ ಶಿಕ್ಷಣ ಕಲಿಕೆಗಳಿಗೆ ಅನುಮತಿಸುವುದನ್ನು ಮುಂದುವರೆಸಲಾಗುವುದು ಮತ್ತು ಪ್ರೋತ್ಸಾಹಿಸಲಾಗುವುದು.
ಸಿನಿಮಾ ಮಂದಿರಗಳು, ಈಜುಕೊಳಗಳು, ಮನೋರಂಜನಾ ಉದ್ಯಾವನಗಳು, ಚಿತ್ರಮಂದಿರಗಳು, ಬಾರ್ಗಳು. ಸಭಾಂಗಣಗಳು, ಅಸೆಂಬ್ಲಿ ಹಾಲ್ಗಳು ಮತ್ತು ಅಂತಹುದೇ ಸ್ಥಳಗಳು.
ಯೋಗಕೇಂದ್ರಗಳನ್ನು ಮತ್ತು ಜಿಮ್ನಾಷಿಯಂಗಳನ್ನು ತೆರೆಯಲು ಆ.05 ರಿಂದ ಅನುಮತಿಸಲಾಗುವುದು. ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಮತ್ತು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಯಾಣಿತ ಕಾರ್ಯ ವಿಧಾನ(ಎಸ್ಒಜಿ) ಹೊರಡಿಸಲಾಗುವುದು.
ಎಂ.ಹೆಚ್.ಎ ಅನುಮತಿಸಿದ ಪ್ರಯಾಣಿಕರ ಅಂತರ ರಾಷ್ಟ್ರೀಯ ವಿಮಾನ ಪ್ರಯಾಣ ಹೊರತುಪಡಿಸಿ. ಮೆಟ್ರೋರೈಲು ಸಾಮಾಜಿಕ/ರಾಜಕೀಯ/ಕ್ರೀಡೆ/ಮನೋರಂಜನೆ/ಶೈಕ್ಷಣಿಕ/ಸಾಂಸ್ಕøತಿಕ/ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳು.
ಈ ಮೇಲಿನ ಚಟುವಟಿಕೆಗಳನ್ನು ಪುನರಾರಂಭಿಸುವುದಕ್ಕೆ ದಿನಾಂಕವನ್ನು ಭಾರತ ಸರ್ಕಾರವು ಪ್ರತ್ಯೇಕವಾಗಿ ನಿರ್ಣಯಿಸಬಹುದು ಮತ್ತು ಭಾರತ ಸರ್ಕಾರದ ಸಂಬಂಧಪಟ್ಟ ಮಂತ್ರಾಲಯಗಳಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಕೋವಿಡ್-19 ಹರಡುವುಕೆಯನ್ನು ತಡೆಗಟ್ಟಲು ಅಗತ್ಯ ಪ್ರಮಾಣಿತ ಕಾರ್ಯ ವಿಧಾನ(ಎಸ್ಒಪಿ) ಹೊರಡಿಸತಕ್ಕದ್ದು. ಸ್ವಾತಂತ್ರ್ಯ ದಿನಾಚರಣೆ: ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲೆ, ಉಪವಿಭಾಗ, ತಾಲ್ಲೂಕುಗಳು, ಮುನ್ಸಿಪಲ್ ಮತ್ತು ಪಂಚಾಯತ್ ವ್ಯಾಪ್ತಿಯಲ್ಲಿ ಹಾಗೂ ಮನೆಗಳಲ್ಲೂ ಆಚರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮುಖಾಂತರ ಮತ್ತು ಇತರೆ ಆರೋಗ್ಯ ಶಿಷ್ಟಾಚಾರಗಳನ್ನು ಪಾಲಿಸುವುದರೊಂದಿಗೆ ಅನುಮತಿಸಲಾಗುವುದು. ಈ ಸಂಬಂಧ ಭಾರತ ಸರ್ಕಾರದ ಗೃಹ ಮಂತ್ರಾಲಯವು ಪತ್ರ ಸಂ.2/5/2020 ಪಬ್ಲಿಕ್ ದಿ: 20.07.2020ರಲ್ಲಿ ಹಿರಡಿಸಿರುವ ಸೂಚನೆಗಳನ್ನು ಪಾಲಿಸತಕ್ಕದ್ದು. ಕಂಟೈನ್ ಮೆಂಟ್ ವಲಯಗಳಿಗೆ ಸೀಮಿತವಾದ ಲಾಕ್ಡೌನ್: ಕಂಟೈನ್ಮೆಂಟ್ ವಲಯಗಳಲ್ಲಿನ ಲಾಕ್ ಡೌನ್ ಆ.31 ರವರೆಗೆ ಮುಂದುವರೆಯುತ್ತದೆ.
ಸೋಂಕಿನ ಪ್ರಸರಣ ಸರಪಳಿಯನ್ನು ಪರಿಣಾಮಕಾರಿಯಾಗಿ ಮುರಿಯುವ ಉದ್ದೇಶದಿಂದ ಆರೋಗ್ಯ ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಹೊರಡಿಸುವ ಮಾರ್ಗಸೂಚಿಯನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಜಿಲ್ಲಾಧಿಕಾರಿಗಳು/ಸಂಬಂಧಿಸಿದ ಇಲಾಖೆಗಳು ವೆಬ್ಸೈಟ್ನಲ್ಲಿ ಪ್ರಕಟಿಸಿ ಈ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದೊಂದಿಗೆ ಹಂಚಿಕೊಳ್ಳುವುದು.
ಕೋವಿಡ್ 19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು : ಮುಖದ ಹೊದಿಕೆ : ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿದೆ. ಅಗತ್ಯಾನುಸಾರ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ ರೂ.200 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ.100 ದಂಡ ವಿಧಿಸತಕ್ಕದ್ದು.
ಸಾಮಾಜಿಕ ಅಂತರ : ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಟ 6 ಅಡಿ ಅಂತರವನ್ನು (2 ಗಜ ಅಂತರ) ಕಾಯ್ದುಕೊಳ್ಳಬೇಕು. ಗ್ರಾಹಕರಲ್ಲಿ ದೈಹಿಕ ಅಂತರ ಇರುವುದನ್ನು ಅಂಗಡಿಗಳು ಖಚಿತಪಡಿಸಿಕೊಳ್ಳತಕ್ಕದ್ದು. ಮದುವೆ ಸಂಬಂಧಿತ ಕೂಟಗಳಲ್ಲಿ ಅತಿಥಿಗಳ ಸಂಖ್ಯೆ 50 ಕ್ಕೆ ಮೀರಿರಬಾರದು. ಶವ ಸಂಸ್ಕಾರ/ಅಂತಿಮ ವಿಧಿ ಸಂಬಂಧಿತ ಕಾರ್ಯಗಳಲ್ಲಿ ವ್ಯಕ್ತಿಗಳ ಸಂಖ್ಯೆ 20 ಕ್ಕೆ ಮೀರಿರಬಾರದು.
ಸ್ಥಳೀಯ ಪ್ರಾಧಿಕಾರಿಗು ಅದರ ಕಾನೂನು ನಿಯಮ ಮತ್ತು ನಿಬಂಧನೆಗಳಲ್ಲಿ ತಿಳಿಸಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡನಾರ್ಹ ಶಿಕ್ಷೆಯಾಗಿರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಯನ್ನು ನಿಷೇಧಿಸಿದೆ.
ಕೆಲಸದ ಸ್ಥಳಗಳಲ್ಲಿ ಹೆಚ್ಚುವರಿ ನಿರ್ದೇಶನಗಳು : ಮನೆಯಿಂದ ಕೆಲಸ (Woಡಿಞ ಜಿಡಿom ಊome) : ಸಾಧ್ಯವಾದಷ್ಟು ಮಟ್ಟಿಗೆ ಮನೆಯಿಂದಲೇ ಕೆಲಸ ಮಾಡುವ ಪದ್ದತಿಯನ್ನು ಅನುಸರಿಸಬೇಕು. ಕೆಲಸದಲ್ಲಿ ಪಾಳಿಯ ಪದ್ದತಿ/ವ್ಯವಹಾರ ಸಮಯ: ಕಚೇರಿಗಳಲ್ಲಿ ಕೆಲಸದ ಸ್ಥಳಗಳಲ್ಲಿ ಅಂಗಡಿಗಳಲ್ಲಿ ಮಾರುಕಟ್ಟೆಗಳಲ್ಲಿ ಮತ್ತು ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ/ವ್ಯವಹಾರದ ಸಮಯದಲ್ಲಿ ಪಾಳಿಯ ಪದ್ದತಿಯನ್ನು ಅನುಸರಿಸುವುದು. ಸ್ಕ್ರೀನಿಂಗ್ ಮತ್ತು ನೈರ್ಮಲ್ಯ: ಎಲ್ಲಾ ಸಾಮಾನ್ಯ ಪ್ರದೇಶಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್, ಕೈ ತೊಳೆಯುವುದಕ್ಕೆ ಮತ್ತು ಸ್ಯಾನಿಟೈಸರ್ಗೆ ಅವಕಾಶ ಕಲ್ಪಿಸುವುದು.
ನಿಯಮಿತ ಸ್ಯಾನಿಟೈಸೇಷನ್ :ಕೆಲಸದ ಸಂಪೂರ್ಣ ಆವರಣ ಸಾಮಾನ್ಯ ಸೌಲಭ್ಯಗಳು ಮತ್ತು ಮಾನವ ಸಂಪರ್ಕಕ್ಕೆ ಬರುವ ಎಲ್ಲಾ ಅಂಶಗಳಿಗೆ ಆಗಾಗ್ಗೆ ನೈರ್ಮಲ್ಯೀಕರಣ ಮಾಡತಕ್ಕದು(ಉದಾ: ಬಾಗಿಲ ಹಿಡಿಕೆಗಳು, ಇತ್ಯಾದಿ) ಇದನ್ನು ಕೆಲಸದ ಪಾಳಿಯ ಮಧ್ಯದಲ್ಲಿ ಸಹ ಖಾತರಿಪಡಿಸಿಕೊಳ್ಳುವುದು. ಸಾಮಾಜಿಕ ಅಂತರ: ಕೆಲಸದ ಸ್ಥಳದಲ್ಲಿ ವ್ಯಕ್ತಿಗಳ ನಡುವೆ ಪಾಳಿಗಳ ನಡುವೆ, ಊಟದ ವಿರಾಮ ಮೊದಲಾದವುಗಳಲ್ಲಿ ಎಲ್ಲಾ ವ್ಯಕ್ತಿಗಳು ಸಾಕಷ್ಟು ಅಂತರವನ್ನು ಕಾಯ್ದುಕೊಂಡಿರುವ ಬಗ್ಗೆ ಮೇಲ್ವಿಚಾರಕರು ಖಾತರಿಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
• ವಿಪತ್ತು ನಿರ್ವಹಣಾ ಕಾಯ್ದೆ -2005 ರ ಅಡಿಯಲ್ಲಿ ಹೊರಡಿಸಲಾದ ಈ ಮಾರ್ಗಸೂಚಿಗಳನ್ನು ಯಾವುದೇ ಪ್ರಾಧಿಕಾರಗಳು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸತಕ್ಕದ್ದಲ್ಲ. • ಎಲ್ಲಾ ಪ್ರಾಧಿಕಾರಗಳು ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸತಕ್ಕದ್ದು. ದಂಡ : ಕೋವಿಡ್ 19 ನಿರ್ವಹಣೆಯ ಲಾಕ್ಡೌನ್ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು, ವಿಪತ್ತು ನಿರ್ವಹಣಾ ಅಧಿನಿಯಮ 2005 ರ ಸೆಕ್ಷನ್ 51 ರಿಂದ 60 ಉಪಬಂಧಗಳು, ಅಲ್ಲದೇ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ದ ಕ್ರಮ ಜರುಗಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿದ್ದು, ಈ ಬಾರಿ ಕೊರೊನಾ ಕಾರಣಕ್ಕೆ ವರ್ಗಾವಣೆ ನಡೆಯುವುದೋ ಇಲ್ಲವೋ ಎಂಬ ಗೊಂದಲ ಮೂಡಿತ್ತು. ಕೊನೆಗೂ ಇದಕ್ಕೆ ತೆರೆ ಬಿದ್ದಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಕರ ವರ್ಗಾವಣೆ ಕುರಿತಂತೆ ಸಿಹಿ ಸುದ್ದಿ ನೀಡಿದ್ದು, ವರ್ಗಾವಣಾ ನಿಯಮಗಳನ್ನು ಶಿಕ್ಷಣ ಇಲಾಖೆಯು ಅಂತಿಮಗೊಳಿಸಿದೆ ಎಂದು ತಿಳಿಸಿದ್ದಾರೆ.
ಶಿಕ್ಷಕ ಸ್ನೇಹಿಯಾದ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದ್ದು, ಇಂದು ಅಧಿಕಾರಿಗಳ ಸಭೆ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಕಳೆದ ಬಾರಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೀಡಾಗಿದ್ದ ಶಿಕ್ಷಕರು ಈ ಬಾರಿಯ ಮೊದಲ ಆದ್ಯತೆಯ ವರ್ಗಾವಣೆಯನ್ನು ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮದ ಬದಲಿಗೆ ಹೊಸ ವರ್ಗಾವಣೆ ಕಾಯ್ದೆ ನಿಯಮ ಅಂತಿಮಗೊಳಿಸಲಾಗಿದ್ದು ಆಗಸ್ಟ್ 20 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು.
ಶಾಲೆ ಆರಂಭಕ್ಕೆ ಮೊದಲೇ ಶಿಕ್ಷಕರಿಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಆಗಸ್ಟ್ 15 ರೊಳಗೆ ವೇಳಾಪಟ್ಟಿ ಬಿಡುಗಡೆ ಮಾಡಲಿದ್ದು, 20 ರಿಂದಲೇ ಪ್ರಕ್ರಿಯೆ ಆರಂಭಿಸಲಾಗುವುದು.
ಕೊರೋನಾ ಕಾರಣದಿಂದ ಶಿಕ್ಷಕರ ವರ್ಗಾವಣೆ ನಡೆಯುವುದು ಅನುಮಾನ ಎಂದು ಹೇಳಲಾಗಿತ್ತು. ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವೇಳಾಪಟ್ಟಿ ಪ್ರಕಟಿಸಲು ಸೂಚಿಸಿದ್ದಾರೆ. ಹೊಸ ವರ್ಗಾವಣೆ ಕಾಯ್ದೆ ನಿಯಮ ಅಂತಿಮಗೊಳಿಸಲಾಗಿದ್ದು, ಬಹುತೇಕ ಆಗಸ್ಟ್ 20 ರಿಂದಲೇ ವರ್ಗಾವಣೆ ಪ್ರಕ್ರಿಯೆ ಶುರುವಾಗಲಿದೆ ಎನ್ನಲಾಗಿದೆ.
ಶಿಕ್ಷಕ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ʼಬಂಪರ್ʼ ಸುದ್ದಿ
ಸುದ್ದಿ:- ನಾಡು ಮಾಹಿತಿ
ಹೊಸ ಶಿಕ್ಷಣ ನೀತಿಯನ್ನು ಸರ್ಕಾರ ಅಂಗೀಕರಿಸಿದೆ. ಇದ್ರಲ್ಲಿ ಶಿಕ್ಷಕರ ಜವಾಬ್ದಾರಿಗಳು ಹೆಚ್ಚಾಗಲಿವೆ. ಆದ್ರೆ ಅವರಿಗೆ ಅನೇಕ ಸೌಲಭ್ಯಗಳು ಸಿಗಲಿವೆ. ಅನಗತ್ಯ ವರ್ಗಾವಣೆ, ಬೋಧಕೇತರ ಚಟುವಟಕೆಯಿಂದ ಮುಕ್ತಿ ಸಿಗಲಿದೆ.
ಶಿಕ್ಷಕರನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ವಸತಿ ಭತ್ಯೆ ಕೂಡ ನೀಡಲಾಗುವುದು. ವಿಶೇಷ ಸಂದರ್ಭದಲ್ಲಿ ಮಾತ್ರ ಶಿಕ್ಷಕರ ವರ್ಗಾವಣೆ ನಡೆಯಲಿದೆ. ಶಿಕ್ಷಕರ ವರ್ಗಾವಣೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಟ್ಟುನಿಟ್ಟಾದ ಮಾನದಂಡದಲ್ಲಿ ಮಾಡಲಿವೆ. ಎಲ್ಲಾ ವರ್ಗಾವಣೆಗಳು ಗಣಕೀಕೃತ ವ್ಯವಸ್ಥೆಯಡಿಯಲ್ಲಿರುತ್ತವೆ.
ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿ ವೇತನ ನೀಡಲಾಗುವುದು. ನಾಲ್ಕು ವರ್ಷಗಳ ಬಿ.ಎಡ್.
ಶಿಕ್ಷಕರು ಇಷ್ಟು ದಿನ ಬೋಧಕೇತರ ಚಟುವಟಕೆಯಲ್ಲಿ ನಿರತರಾಗಿದ್ದರು.ಇನ್ಮುಂದೆ ಶಿಕ್ಷಕರು ಭೋಧನೆಗೆ ಹೆಚ್ಚು ಗಮನ ನೀಡಲಿದ್ದಾರೆ. ಮಕ್ಕಳ ಅಭಿವೃದ್ಧಿಗೆ ಶಿಕ್ಷಕರು ಗಮನ ನೀಡಲಿದ್ದಾರೆ. ಸಂದರ್ಶನದಲ್ಲಿ ಭಾಷೆಯನ್ನು ಪರೀಕ್ಷಿಸಲಾಗುವುದು. ನೇಮಕಾತಿಯಲ್ಲಿ ಸ್ಥಳೀಯ ಭಾಷಾ ಜ್ಞಾನ ಪರೀಕ್ಷಿಸಲಾಗುವುದು. ಇದರಿಂದ ಶಿಕ್ಷಕರು ಮಕ್ಕಳ ಮನಸ್ಸನ್ನು ಸುಲಭವಾಗಿ ಅರ್ಧ ಮಾಡಿಕೊಳ್ಳಬಹುದಾಗಿದೆ. ಖಾಸಗಿ ಶಾಲೆಗಳಲ್ಲಿ ಬೋಧಿಸುವ ಶಿಕ್ಷಕರು ಸಹ ಈ ಮಾನದಂಡವನ್ನು ಅನುಸರಿಸಬೇಕಾಗುತ್ತದೆ.
ಶಾಲೆಯಲ್ಲಿ ಕುಡಿಯುವ ನೀರು, ಶೌಚಾಲಯಗಳು, ಸ್ವಚ್ಛತೆ, ಮುಕ್ತ ಸ್ಥಳ, ಕಂಪ್ಯೂಟರ್, ಇಂಟರ್ನೆಟ್, ಗ್ರಂಥಾಲಯ ಮತ್ತು ಆಟದ ಸೌಲಭ್ಯಗಳನ್ನು ಒದಗಿಸಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸಮಾನ ಹಕ್ಕು ನೀಡಲಾಗುವುದು.
ಶಿಕ್ಷಕರಿಗೆ ಸಹಾಯ ಮಾಡಲು ಸಲಹೆಗಾರರು, ಸಾಮಾಜಿಕ ಕಾರ್ಯಕರ್ತರು, ತಾಂತ್ರಿಕ ತಜ್ಞರ ತಂಡಗಳು ಇರಲಿವೆ. ಸ್ಥಳೀಯ ಮಟ್ಟದಲ್ಲಿ ಮಾಸ್ಟರ್ ಇನ್ಸ್ಟ್ರಕ್ಟರ್ ನೇಮಿಸಬೇಕಾಗುತ್ತದೆ. ಈ ಜನರು ಕಲೆ, ಕೃಷಿ ಮತ್ತು ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಇತರ ತಂತ್ರಗಳ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾರೆ.